ಗೋವಾ: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಇಂದು ಭೇಟಿಯಾಗಿದ್ದಾರೆ.
ಸ್ವತಃ ಸಿಎಂ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕೆಜಿಎಫ್ ಸೂಪರ್ ಸ್ಟಾರ್ ಯಶ್, ಅವರ ಪತ್ನಿ ರಾಧಿಕಾ ಪಂಡಿತ್ ಮತ್ತು ತಂಡವನ್ನು ಪಣಜಿಯಲ್ಲಿ ಭೇಟಿದ್ದು ಸಂತಸ ತಂದಿದೆ ಎಂದು ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದಾರೆ.
ದೇಶಾದ್ಯಂತ ಮಾತ್ರವಲ್ಲದೆ ವಿದೇಶದಲ್ಲಿಯೂ ಕೆಜಿಎಫ್ 2 ಭಾರೀ ಸದ್ದು ಮಾಡಿದ ಬೆನ್ನಲ್ಲೇ ನಟ ಯಶ್ ಪಾಲಿಟಿಕ್ಸ್ಗೆ ಎಂಟ್ರಿ ಕೊಡುವ ಬಗ್ಗೆ ಭಾರೀ ಚರ್ಚೆ ಶುರುವಾಗಿದೆ. ಸಮಾಜಮುಖಿ ಕಾರ್ಯಗಳಲ್ಲಿ ಮುಂದಿರುವ ಯಶ್ ದಂಪತಿ ಗೋವಾ ಸಿಎಂ ಅವರನ್ನು ನೇರವಾಗಿ ಭೇಟಿಯಾಗಿರುವುದು ಅನೇಕ ಚರ್ಚೆಗಳಿಗೆ ನಾಂದಿ ಹಾಡಿದೆ.